Sep 19, 2008

ಪ್ರಶೋತ್ತರ ಭಾಗ ೨

೧. ’ಶಬ್ದಾವತಾರ’ ಎಂಬ ಸಂಸ್ಕೃತ ವ್ಯಾಕರಣ ಕೃತಿ ರಚಿಸಿದ ಗಂಗರ ದೊರೆ ಯಾರು?
ಉತ್ತರ : ದುರ್ವಿನೀತ

೨. ಎ.ಕೆ. ರಾಮಾನುಜನ್ ರವರು ಇಂಗ್ಲೀಷ್ ಗೆ ಅನುವಾದಿಸಿದ ಅನಂತಮೂರ್ತಿಯವರ ಕಾದಂಬರಿ?
ಉತ್ತರ : ಸಂಸ್ಕಾರ

೩. ’ಇಂದಿರಾಬಾಯಿ’ ಕಾದಂಬರಿಯ ಪರ್ಯಾಯ ಶೀರ್ಷಿಕೆ ಯಾವುದು?
ಉತ್ತರ : ಸದ್ಧರ್ಮ ವಿಜಯ

೪. ’ವಿಕ್ರಮಾರ್ಜುನ ವಿಜಯ’ದಲ್ಲಿರುವ ಒಟ್ಟು ಆಶ್ವಾಸ ಮತ್ತು ಪದ್ಯಗಳೆಷ್ಟು?
ಉತ್ತರ : ೧೪ ಆಶ್ವಾಸ - ೧೬೦೯ ಪದ್ಯ

೫. ರಾಷ್ಟ್ರಕವಿ ಕುವೆಂಪುರವರನ್ನು ’ಆಧುನಿಕ ವಾಲ್ಮೀಕಿ’ ಎಂದು ಕರೆದ ಭಾರತದ ಸಂತ, ಸಮಾಜ ಸುಧಾರಕ ಯಾರು?
ಉತ್ತರ : ವಿನೋಭಾ ಭಾವೆ

೬. ನಾಗವರ್ಮನ ’ಕರ್ಣಾಟಕ ಕಾದಂಬರಿ’ ಕೃತಿಯಲ್ಲಿ ವರ್ಣಿತವಾಗಿರುವ ಸರೋವರ?
ಉತ್ತರ : ಅಚ್ಛೋದ ಸರೋವರ

೭. ಶ್ರೀ ಮಧ್ವಾಚಾರ್ಯರು ಪ್ರತಿಪಾದಿಸಿದ ಸಿದ್ಧಾಂತ ಯಾವುದು?
ಉತ್ತರ : ದ್ವೈತ

೮. ’ತಿರುಕ’ ಕಾವ್ಯನಾಮವುಳ್ಳ ಕವಿಯ ಪೂರ್ಣ ಹೆಸರೇನು?]
ಉತ್ತರ : ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿ

೯. ’ಭಾರತೀಯ ನಾಟ್ಯರಂಗ’ ಪ್ರಶಸ್ತಿ ಪಡೆದ ಗಿರೀಶ್ ಕಾರ್ನಾಡರ ನಾಟಕ ಯಾವುದು?
ಉತ್ತರ : ಹಯವದನ

೧೦. ಶ್ರೀ ಪಾದರಾಜರ ಕೀರ್ತನೆಗಳ ಅಂಕಿತ ಯಾವುದು?
ಉತ್ತರ : ಶ್ರೀರಂಗವಿಠಲ