Dec 15, 2014

ಜಾನಪದ ಲೋಕ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರದಿಂದ 8 ಕಿ.ಮೀ. ದೂರದಲ್ಲಿ ಬಲಗಡೆಗೆ 15 ಎಕರೆ ವಿಶಾಲವಾದ ಜಾಗದಲ್ಲಿ ಜಾನಪದ ಲೋಕ ಸೃಷ್ಟಿಯಾಗಿದ್ದು, ಪ್ರವಾಸಿಗರನ್ನು ಜನಪದ ವಿಶೇಷತೆಗಳಿಂದ ಸ್ವಾಗತಿಸುತ್ತಿದೆ. ಮುಖ್ಯ ದ್ವಾರದಲ್ಲಿ ನಗುತ್ತಿರುವ ನಿಗಿ ನಿಗಿ ಸೂರ್ಯ ನಂದಿ ಧ್ವಜಗಳ ಮಧ್ಯೆ "ಬನ್ನಿ ಒಳ ಬನ್ನಿ" ಎನ್ನುತ್ತಾನೆ. 1994ರ ಮಾ.12ರಂದು ಆರಂಭವಾದ ಈ ವಿಸ್ಮಯ ಲೋಕ ಜಗತ್ತಿನ ಪ್ರಮುಖ ಸಾಂಸ್ಕೃತಿಕ ಲೋಕಗಳಲ್ಲೊಂದು ಎಂಬುದು ಕನ್ನಡಿಗ ಹೆಮ್ಮೆ. 'ಗಜಮುಖನೇ ಗಣಪತಿಯೇ ನಿನಗೆ ವಂದನೆ' ಎಂದೆನ್ನೆಲು ಅಲ್ಲೊಂದು ಪುಟ್ಟದಾದ, ಚೊಕ್ಕವಾದ ಗಣೇಶ ಮಂದಿರ. ಅನಂತರ ಅನಾವರಣಗೊಳ್ಳುತ್ತೆ ನಮ್ಮ ಮುಂದೊಂದು ಅನುಪಮ 'ಜಾನಪದ ಜಗತ್ತು'.ಅಚ್ಚರಿ ಮತ್ತು ಅಷ್ಟೇ ಹೆಮ್ಮೆ ಪಡಬಹುದಾದ ಮತ್ತೊಂದು ವಿಷಯವೆಂದರೆ ಜಾನಪದ ಕಲೆಗಳ ಬಗ್ಗೆ ಒಂದೇ ಸಮನೆ 1800 ಗಂಟೆಗಳ ಕಾಲ ಕುಳಿತು ನೋಡಬಹುದಾದಷ್ಟು ವಿಡಿಯೋ ಸಂಗ್ರಹವಿದೆ. ಸುಮಾರು 800 ಗಂಟೆಗಳಷ್ಟು ಬಿಡುವಿಲ್ಲದೇ ಕೇಳಬಹುದಾದಷ್ಟು ಧ್ವನಿಮುದ್ರಿಕೆಗಳ ಸಂಗ್ರಹವಿದೆ. ಇಲ್ಲಿ ವಿಡಿಯೋ ಥಿಯೇಟರ್ ಕೂಡ ಇದೆ.ಬಗಲಲ್ಲೆ ಒಂದು ಜಾನಪದ ಸಂಶೋಧನಾ ಕೇಂದ್ರವಿದ್ದು, ಸಂಬಂಧಪಟ್ಟ ಕಲೆಗಳಲ್ಲಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳನ್ನು ನಡೆಸಲಾಗುತ್ತಿದೆ.
ಜಾನಪದ ಸೊಗಡು ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಈ ಲೋಕದಲ್ಲಿ ನಡೆಸುತ್ತಿರುವ ಕೋರ್ಸ್ ಗಳು, ಸಾಹಸ ಮೆಚ್ಚುವಂಥದ್ದು. ಮಂಗಳವಾರ ಹೊರತುಪಡಿಸಿ ಮಿಕ್ಕೆಲ್ಲ ದಿನಗಳಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆವಿಗೂ ಚಟುವಟಿಕೆಯಿಂದಿರುವ ಈ ಕೆಂದ್ರದಲ್ಲಿ ಪ್ರತಿ ತಿಂಗಳ ಕೋನೆ ಭಾನುವಾರ ಹಲವಾರು ಜನಪದ ಕಲೆಗಳ ಪ್ರದರ್ಶನ ಇರುತ್ತದೆ. ಜಾನಪದ ಸಂಸ್ಕೃತಿ ಮೇಲೆ ಬೆಳಕು ಚೆಲ್ಲುವಂಥ ಈ ಕಾರ್ಯಕ್ರಮ ತಪ್ಪದೇ ವೀಕ್ಷಿಸುವ ಮನಸ್ಸು ಎಲ್ಲರದ್ದಾಗಲಿ.
200 ವರ್ಷಗಳ ಹಳೆಯ ಬಂಡಿ, ಜೇಡಿ ಮಣ್ಣಿನಿಂದಾದ ಮಡಕೆ, ಕುಡಿಕೆ, ದೀಪದ ಬುಡ್ಡಿಗಳು ಇಂದಿನ ಐಟಿ-ಬಿಟಿ ಮಂದಿ ಜೀವನ ಹಾಗೂ ಹಳ್ಳಿ ಜನರ ಝೀವನಕ್ಕೆ ಇರುವ ಅಜ-ಗಜಾಂತರ ವ್ಯತ್ಯಾಸದ ಬಗ್ಗೆ ಚಿಂತನೆ ಹಚ್ಚುತ್ತವೆಲೋಕಮಹಲ್, ಶಿಲ್ಪಮಾಳ,ಆಯಗಾರರ ಮಾಳ,ತೊಟ್ಟಿಮನೆ,ಕಂಬಗಳ ಮನೆ ಹೀಗೆ ಒಂದೊಂದು ವಸ್ತು ಸಂಗ್ರಹಾಗರಕ್ಕೆ ಒಂದೊಂದು ವಿಶ್ಇಷ್ಟ ಹೆಸರು.ದಾರಿ ದಿಕ್ಕು ತೋರಲು ಗೋಕುಲಾಷ್ಟಮಿ ಕೃಷ್ಣನ ಪಾದದ ಗುರುತು. ತೊಗಲು ಗೊಂಬೆ, ಆಯುಧಗಳು, ಮದುವೆ,ಸೀಮಂತ ಮುಂತಾದ ಶಾಸ್ತ್ರಗಳಲ್ಲಿ ಬಳಸುವ ವಸ್ತುಗಳು,ಜನಪದ ವಾದ್ಯಗಳು, ಆಟಿಕೆಗಳು, ವರ್ಣಚಿತ್ರಗಳು, ಗ್ರಾಮೀಣ ಕಸಬುಗಳ ಉಪಕರಣಗಳು, ತಾಳೆ ಗರಿಗಳು ಇನ್ನೂ ಮುಂತಾದ 500ಕ್ಕೂ ಹೆಚ್ಚು ಜಾನಪದ ಸಲಕರಣೆಗಳನ್ನು ಕಲಾತ್ಮಕವಾಗಿ ವೈಜ್ಞಾನಿಕವಾಗಿ ಜತನದಿಂದ ಕಾಪಾಡಲಾಗಿದೆ. ಇಲ್ಲಿ 1200 ವರ್ಷಗಳಿಗೂ ಹಳೆಯದಾದ ಶಾಸನ, ವೀರಗಲ್ಲು, ಲಿಪಿಗಳು ಕಾಣಸಿಗುತ್ತವೆ.
ಇಂದು ಎಕರೆ ಜಾಗದಲ್ಲಿ ನಿರ್ಮಿತವಾಗಿರುವ ಸ್ವಚ್ಛಂದ ಕೊಳ, ನೆಮ್ಮದಿಯಿಂದ ಈಜುತ್ತಿರುವ ಬಾತು ಕೋಳಿಗಳು, ಮತ್ತು ಮಕ್ಕಳಿಗಾಗಿ ದೋಣಿ ವಿಹಾರ 1000 ಜನ ಕುಳಿತುಕೊಳ್ಳಲು ಸಾಧ್ಯವಾಗುವಂಥ ಗ್ರೀಕ್ ಮಾದರಿಯ ರಂಗ ಮಂದಿರ, ಅಲ್ಲೆ ವಸ್ತುಗಳನ್ನು ತಯಾರು ಮಾಡುತ್ತಿರುವ ಕರಕುಶಲ ಕರ್ಮಿಗಳು, ತಮ್ಮಷ್ಟಕ್ಕೆ ತಾವೇ ಗೀಗಿ ಪದ ಹಾಡಿಕೊಳ್ಳುತ್ತಿರುವ ಜನಪದರು, ನೃತ್ಯಾಭ್ಯಾಸ ಮಾಡುತ್ತಿರುವ ಕಲಾವಿದರು ಎಲ್ಲರನ್ನೂ ಕಾಣಬಹುದು

Dec 10, 2014

ಮಹಾಭಾರತ

ಮಹಾಭಾರತ

ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು. ಇದು ಹಿಂದೂ ಧರ್ಮದ ಒಂದು ಮುಖ್ಯ ಪಠ್ಯವೂ ಹೌದು. ವಿಶ್ವ ಸಾಹಿತ್ಯದ ಸಾಧನೆಗಳಲ್ಲಿ ಒಂದೆಂದು ಪರಿಗಣಿತವಾಗಿರುವ ಮಹಾಭಾರತ ಭಾರತೀಯ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.
ಸಂಪೂರ್ಣ ಮಹಾಭಾರತ ಒಂದು ಲಕ್ಷಕ್ಕೂ ಹೆಚ್ಚು ಶ್ಲೋಕಗಳನ್ನು ಒಳಗೊಂಡಿದ್ದು ಗ್ರೀಕ್ ಮಹಾಕಾವ್ಯಗಳಾದ ಇಲಿಯಡ್ ಮತ್ತು ಒಡಿಸ್ಸಿ - ಎರಡನ್ನೂ ಸೇರಿಸಿದರೂ ಮಹಾಭಾರತದ ಏಳನೇ ಒಂದು ಭಾಗದಷ್ಟು ಮಾತ್ರ ಆಗುತ್ತದೆ.

ಇತಿಹಾಸ ಹಾಗೂ ಹಿನ್ನೆಲೆ

ಮಹಾಭಾರತ 'ಜಯ' ಎಂಬ ಗ್ರಂಥದಿಂದ ನಿಷ್ಪನ್ನವಾಗಿದ್ದೆಂದು ಕೆಲವರ ಪ್ರತೀತಿ. ಇದರಲ್ಲಿ ಉಲ್ಲೇಖಿಸಿರುವ ಘಟನೆಗಳ ನಿಜವಾದ ಕಾಲ ಸರಿಯಾಗಿ ತಿಳಿದಿಲ್ಲ. ಮಹಾಭಾರತದಲ್ಲಿ ಕಂಡುಬರುವ ಘಟನೆಗಳು ನಿಜವಾದ ಘಟನೆಗಳನ್ನು ಆಧರಿಸಿ ಬರೆದದ್ದೋ ಅಲ್ಲವೋ ಎಂಬುದು ಕೆಲವರಲ್ಲಿ ಚರ್ಚಾಸ್ಪದ ವಿಷಯ. ಕೆಲವು ಚರಿತ್ರಜ್ಞರ ಪ್ರಕಾರ ಈ ಘಟನೆಗಳು ನಡೆದ ಸಂದರ್ಭ ಸುಮಾರು ಕ್ರಿ.ಪೂ. ೧೪೦೦. ಇನ್ನು ಮಹಾಭಾರತದ ಘಟನೆಗಳನ್ನು ಅವಲೋಕಿಸಿದ ಹಲವು ವಿದುಷರ ಪ್ರಕಾರ ಅದರಲ್ಲಿ ಉಲ್ಲೇಖ ಮಾಡಲಾಗಿರುವ ಅಂತರಿಕ್ಷ ಚಟುವಟಿಕೆಗಳು (ಗ್ರಹಣ ಇತ್ಯಾದಿ) ಸುಮಾರು ಕ್ರಿ.ಪೂ. ೩೧೦೦ಕ್ಕೆ ಹೋಲುತ್ತದೆಂದು ಹೇಳಲಾಗುತ್ತದೆ. ಆದ್ದರಿಂದ ಇವು ಘಟಿತ ಘಟನೆಗಳೋ ಅಲ್ಲವೋ, ಹೌದಾಗಿದ್ದರೆ ಯಾವ ಕಾಲದಲ್ಲಿ ನಡೆದದ್ದು ಎಂಬ ಎಲ್ಲಾ ವಿಷಯಗಳ ಬಗೆಗೆ ಹಲವು ಭಿನ್ನಾಭಿಪ್ರಾಯಗಳಿವೆ.

ಕಥಾವಸ್ತು

ಮಹಾಭಾರತದ ಮುಖ್ಯವಾಗಿ ಚಂದ್ರ ವಂಶದ ರಾಜರುಗಳ ಕಥೆ. ಹಸ್ತಿನಾಪುರದ ಸಿಂಹಾಸನಕ್ಕಾಗಿ ಕುರು ವಂಶದ ಸದಸ್ಯರ ನಡುವೆ ನಡೆಯುವ ಹೋರಾಟವನ್ನು ಕುರಿತದ್ದು ಎಂದು ಹಲವರ ಅಭಿಮತವಾದರೂ ಈ ಹೋರಾಟದ ಕಥೆ ಕುರುಕ್ಷೇತ್ರ ಕಥೆ ಎನಿಸಿಕೊಳ್ಫುತ್ತದೆ. ಹಸ್ತಿನಾಪುರದ ಸಿಂಹಾಸನಕ್ಕಾಗಿ ಪಾಂಡವರು ಮತ್ತು ಕೌರವರ ನಡುವೆ ನಡೆಯುವ ಈ ಹೋರಾಟ ಕುರುಕ್ಷೇತ್ರದಲ್ಲಿ ನಡೆಯುವ ಹದಿನೆಂಟು ದಿನದ ಕುರುಕ್ಷೇತ್ರ ಯುದ್ದದಲ್ಲಿ ನಿರ್ಧಾರವಾಗುತ್ತದೆ. ಮಹಾಭಾರತದ ಕಥೆ ಶಂತನು ಮಹಾರಾಜನ ಕಥೆಯಿಂದ್ ಆರಂಭವಾಗಿ, ಕೃಷ್ಣನ ಅವಸಾನ, ಪಾಂಡವರ ಸ್ವರ್ಗಾರೋಹಣದೊಂದಿಗೆ ಕೊನೆಗೊಳ್ಳುತ್ತದೆ. ಮಹಾಭಾರತದ ಉದ್ದಕ್ಕೂ ಬರುವ ಪಾತ್ರಗಳು ಭಾರತೀಯ ಸಂಸ್ಕೃತಿಯಲ್ಲಿ ಅಚ್ಚೊತ್ತಿರುವ ಪಾತ್ರಗಳು.
ಮುಖ್ಯ ಕಥೆಯಲ್ಲದೆ, ಮಹಾಭಾರತದಲ್ಲಿ ಅನೇಕ ಉಪಕಥೆಗಳುಂಟು. ಹಾಗೆಯೇ ಭಗವದ್ಗೀತೆಯಂಥ ಸ್ವತಂತ್ರವಾಗಿ ನಿಲ್ಲಬಲ್ಲಂಥ ಗ್ರಂಥಗಳೂ ಮಹಾಭಾರತದ ಭಾಗಗಳಾಗಿ ಭೀಷ್ಮ ಪರ್ವದಲ್ಲಿ ಕಂಡುಬರುತ್ತವೆ. ವ್ಯವಸ್ಥೆಯ ದೃಷ್ಟಿಯಿಂದ, ಮಹಾಭಾರತದಲ್ಲಿ ಹದಿನೆಂಟು ಪರ್ವಗಳಿವೆ.

ಮುಖ್ಯ ಪಾತ್ರಗಳು

ಪರ್ವಗಳು

ಉಪಕಥೆಗಳು ಮತ್ತು ಗ್ರಂಥಗಳು

ಮಹಾಭಾರತದ ಭಾಗವಾದ ಹಲವು ಪ್ರಮುಖ ಕಥೆಗಳು/ಗ್ರಂಥಗಳು:

ತತ್ವಶಾಸ್ತ್ರ

ಮಹಾಭಾರತ ವಿಶಾಲವಾದ ತತ್ವಶಾಸ್ತ್ರವನ್ನು ಒಳಗೊಂಡ ಗ್ರಂಥ. ಕೆಲವರು ಇದನ್ನು "ಐದನೆಯ ವೇದ" ಎಂದೇ ಕರೆದಿದ್ದಾರೆ. ಮಹಾಭಾರತದ ತಾತ್ವಿಕ ಬೇರುಗಳು ಇರುವುದು ವೈದಿಕ ತತ್ವಶಾಸ್ತ್ರದಲ್ಲಿ. ಮಹಾಭಾರತದ ಒಂದು ಶ್ಲೋಕ ಹೇಳುವಂತೆ, ಅದರ ಮುಖ್ಯ ಗುರಿ ನಾಲ್ಕು ಪುರುಷಾರ್ಥಗಳನ್ನು ತಿಳಿಸಿಕೊಡುವುದು: ಅರ್ಥ, ಕಾಮ, ಧರ್ಮ, ಮತ್ತು ಮೋಕ್ಷ.
ಮಹಾಭಾರತದ ಅನೇಕ ಭಾಗಗಳು, ಉಪಕಥೆಗಳು ಮತ್ತು ಉಪಗ್ರಂಥಗಳು ಪ್ರಾಚೀನ ಭಾರತದ ವಿವಿಧ ತತ್ವಶಾಸ್ತ್ರಗಳನ್ನು ವರ್ಣಿಸುತ್ತವೆ. ವೇದಾಂತ, ಸಾಂಖ್ಯ, ಯೋಗ, ಪಂಚರಾತ್ರ, ಯೋಗ ಮೊದಲಾದ ತಾತ್ವಿಕ ಸಂಪ್ರದಾಯಗಳನ್ನು ಒಳಗೊಂಡ ಮಹಾಭಾರತ ಭಾರತೀಯ ತತ್ವಶಾಸ್ತ್ರದ ಮುಖ್ಯ ಆಕರಗಳಲ್ಲಿ ಒಂದೂ ಹೌದು. ವಿವಿಧ ತಾತ್ವಿಕ ನೆಲೆಗಟ್ಟುಗಳ ಮಧ್ಯೆ ಅವುಗಳ ಬಗೆಗಿನ ಸಹಿಷ್ಣುತೆಯೂ ಮಹಾಭಾರತದ ತತ್ವಶಾಸ್ತ್ರದಲ್ಲಿ ಕಂಡುಬರುತ್ತದೆ. ಮಹಾಭಾರತದಲ್ಲಿ ವೈಶಂಪಾಯನ ಜನಮೇಜಯನಿಗೆ ಹೇಳುತ್ತಾನೆ:
"ಓ ವಿವೇಕಿ! ಇವೆಲ್ಲವೂ ಜ್ಞಾನವನ್ನೇ ಪ್ರತಿನಿಧಿಸುತ್ತವೆ ಎಂದು ತಿಳಿ: ಸಾಂಖ್ಯ, ಯೋಗ, ಪಂಚರಾತ್ರ, ಆರಣ್ಯಕ. ಅವುಗಳ ದಾರಿಗಳು ಬೇರೆ, ಆದರೆ ಮೂಲದಲ್ಲಿ ಎಲ್ಲವೂ ಒಂದೇ!"
ಮಹಾಭಾರತದಲ್ಲಿ ಅಧ್ಯಾತ್ಮಿಕ ತತ್ವಶಾಸ್ತ್ರವಲ್ಲದೇ ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜನೀತಿ, ಯುದ್ಧನೀತಿ, ಖಗೋಳಶಾಸ್ತ್ರ ಮೊದಲಾದ ವಿಷಯಗಳ ಬಗ್ಗೆಯೂ ಬಹಳಷ್ಟು ಮಾಹಿತಿಯುಂಟು.

ಕನ್ನಡ ಸಾಹಿತ್ಯದಲ್ಲಿ ಮಹಾಭಾರತ

ಮಹಾಭಾರತದಿಂದ ಸ್ಫೂರ್ತಿ ಪಡೆದ ಕನ್ನಡ ಸಾಹಿತ್ಯ ವಿಪುಲವಾಗಿದೆ. ಕನ್ನಡದಲ್ಲಿ ಮಹಾಭಾರತದ ಮೊದಲ ಬರವಣಿಗೆಯ ಕರ್ತೃ ಆದಿಕವಿ ಪಂಪ - ಪಂಪನ ವಿಕ್ರಮಾರ್ಜುನ ವಿಜಯ ಕನ್ನಡದ ಮೇರುಕೃತಿಗಳಲ್ಲಿ ಒಂದೆಂದು ಪರಿಗಣಿತವಾಗಿದೆ. ಗದ್ಯ ಮತ್ತು ಪದ್ಯಮಿಶ್ರಿತವಾದ "ಚಂಪೂ" ಶೈಲಿಯಲ್ಲಿ ಬರೆಯಲ್ಪಟ್ಟಿರುವ ಪಂಪ ಭಾರತ ತನ್ನ ಆಳವಾದ ಮಾನವೀಯ ಮೌಲ್ಯಗಳಿಗೆ ಹೆಸರಾಗಿದೆ. ಸುಮಾರು ಇದೇ ಕಾಲದ ರನ್ನನ "ಗದಾಯುದ್ಧಂ" ಮಹಾಭಾರತ ಯುದ್ಧದ ಭೀಮ-ದುರ್ಯೋಧನರ ಗದಾಯುದ್ಧವನ್ನು ಕುರಿತದ್ದಾದರೂ ಇಡಿಯ ಮಹಾಭಾರತ ಕಥೆಯನ್ನು ಸಿಂಹಾವಲೋಕನ ಕ್ರಮದಲ್ಲಿ ಪರಿಶೀಲಿಸುತ್ತದೆ.
ಕನ್ನಡದಲ್ಲಿ ಬಹಳ ಖ್ಯಾತಿ ಪಡೆದ ಮಹಾಭಾರತ, ಕುಮಾರವ್ಯಾಸ ವಿರಚಿತ "ಕರ್ಣಾಟ ಭಾರತ ಕಥಾಮಂಜರಿ"ಯು ಕುಮಾರವ್ಯಾಸ ಭಾರತ ಅಥವಾ "ಗದುಗಿನ ಭಾರತ" ಎಂದು ಕರೆಯಲ್ಪಡುತ್ತದೆ. ಈ ಕೃತಿ ಭಾಮಿನಿ ಷಟ್ಪದಿಯಲ್ಲಿ ಬರೆಯಲ್ಪಟ್ಟಿದ್ದು ತನ್ನ ಪಾತ್ರವೈವಿಧ್ಯತೆ ಹಾಗೂ ಶ್ರೀಮಂತ ರೂಪಕಗಳಿಗೆ ಹೆಸರಾಗಿದೆ. ಕುಮಾರವ್ಯಾಸ ಕೃಷ್ಣನ ಭಕ್ತ - ಕೃಷ್ಣಾವಸಾನದ ನಂತರ ಕುಮಾರವ್ಯಾಸ ತನ್ನ ಕಾವ್ಯವನ್ನು ಮುಗಿಸಿರುವುದರಿಂದ ಸಂಸ್ಕೃತ ಮಹಾಭಾರತದ ಮೊದಲ ಹತ್ತು ಪರ್ವಗಳನ್ನು ಮಾತ್ರ ಕುಮಾರವ್ಯಾಸ ಭಾರತ ಒಳಗೊಂಡಿದೆ. ಮಹಾಭಾರತದ ಉಳಿದ ಭಾಗ ವಾರ್ಧಕ ಷಟ್ಪದಿಯಲ್ಲಿ, ಲಕ್ಷ್ಮೀಶ ಕವಿ ವಿರಚಿತ "ಜೈಮಿನಿ ಭಾರತ"ದಲ್ಲಿ ಮೂಡಿ ಬ೦ದಿದೆ.
ಆಧುನಿಕ ಕನ್ನಡದಲ್ಲಿ ಪ್ರಸಿದ್ಧವಾದ ಮಹಾಭಾರತದ ಆವೃತ್ತಿ ಎ ಅರ್ ಕೃಷ್ಣಶಾಸ್ತ್ರಿಗಳು ಬರೆದ "ವಚನ ಭಾರತ." ಈ ಕೃತಿ ಸರಳವಾದ ಆಧುನಿಕ ಕನ್ನಡದಲ್ಲಿ ಬರೆಯಲ್ಪಟ್ಟಿದೆ. ಆಧುನಿಕ ಕನ್ನಡದಲ್ಲಿ ಮಹಾಭಾರತದ ಇನ್ನೊಂದು ಕೃತಿ "ಪರ್ವ" (ಎಸ್ ಎಲ್ ಭೈರಪ್ಪ).
ೇಲಿನವು ಮುಖ್ಯ ಮಹಾಭಾರತ ಕಥೆಯನ್ನು ಆಧರಿಸಿ ಬರೆದ ಕೃತಿಗಳಾದರೆ, ಮಹಾಭಾರತದ ವಿವಿಧ ಪಾತ್ರಗಳು ಮತ್ತು ಸನ್ನಿವೇಶಗಳನ್ನು ಆಧರಿಸಿ ಬರೆದ ಕೃತಿಗಳು ಅನೇಕ. ಆಧುನಿಕ ಕನ್ನಡದಲ್ಲಿ ಕುವೆಂಪು ರವರ "ಬೆರಳ್ ಗೆ ಕೊರಳ್" ಮಹಾಭಾರತದ ಏಕಲವ್ಯನ ಪಾತ್ರವನ್ನು ಆಧರಿಸಿ ಬರೆದ ನಾಟಕ. ಹಾಗೆಯೇ ಬಿ ಎಂ ಶ್ರೀ ರವರ "ಗದಾಯುದ್ಧಂ" ರನ್ನನ ಕಾವ್ಯದ ನಾಟಕ ರೂಪಾಂತರ. ಗಿರೀಶ್ ಕಾರ್ನಾಡ್ ರ "ಯಯಾತಿ" ಮಹಾಭಾರತದ ಉಪಕಥೆಯೊಂದನ್ನು ಆಧರಿಸಿ ಬರೆದ ನಾಟಕ. ಇತ್ತೀಚೆಗೆ ರಾಮಚಂದ್ರ ಭಾವೆಯವರು ಅಂಧಪರ್ವ, ಅಶ್ವಮೇಧ ಕಾದಂಬರಿಗಳನ್ನು ಬರೆದಿದ್ದಾರೆ. ಅವು ಕ್ರಮವಾಗಿ ಸುಧಾ ಮತ್ತು ತರಂಗಗಳಲ್ಲಿ ಪ್ರಕಟವಾಗಿವೆ. ಅಂಧಪರ್ವ ಕಾದಂಬರಿಯಾಗಿ ಹೊರಬಂದಿದೆ. ಅಲ್ಲದೆ ಮಹಾಭಾರತ ಪಾತ್ರಪ್ರಪಂಚ ಎಂಬ ಸಂಕಲನವೂ ಇದೆ.

ಕೆಲವು ಉಕ್ತಿಗಳು

- See more at: http://www.nammakannadanaadu.com/purana/mahabharata.php#sthash.olzCuSRc.dpuf